ಬೆಳಗಾವಿ: ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಬೆನಕಟ್ಟಿ ಗ್ರಾಮದಲ್ಲಿ ಶನಿವಾರ ವ್ಯಕ್ತಿಯೋರ್ವನನ್ನು ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ತಾಲೂಕಿನ ಸೌಂದತ್ತಿ ಗ್ರಾಮದ ಕಾಡಪ್ಪ ರುದ್ರಪ್ಪ ಶಿರಸಂಗಿ (42) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳನ್ನು ಲಕ್ಷ್ಮಣ ದೇವೇಂದ್ರಪ್ಪ ಹುಲಿ (ವಯಸ್ಸು 21, ಮಾಬ್ನೂರು ನಿವಾಸಿ) ಮತ್ತು ಸತೀಶ ಯಮನಪ್ಪ ಆರಿಬೆಂಚಿ (28, ಜೀವಾಪುರ ನಿವಾಸಿ) ಎಂದು ಗುರುತಿಸಲಾಗಿದೆ. ಈ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
0 ಕಾಮೆಂಟ್ಗಳು