ಬೆಳಗಾವಿ : ಕರ್ನಾಟಕ : ಸದ್ಯ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ನಾನು ಮುಖ್ಯಮಂತ್ರಿಯಾಗುವ ತಯಾರಿಯಲ್ಲಿದ್ದೇನೆ. ಆದರೆ, ಆ ತಯಾರಿ ಸದ್ಯಕ್ಕಲ್ಲ 2028ಕ್ಕೆ. ಹಾಗಾಗಿ ಯಾರೂ ಬೇರೆ ವ್ಯಾಖ್ಯಾನ ಮಾಡಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತೇನೆ ಎಂದು ಆಪ್ತ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಜಾರಕಿಹೊಳಿ ಭಾನುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಸಚಿವ ಸತೀಶ್ ಮಾತನಾಡಿದರು. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಲುಕಿದ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಗಾಳಿ ಬೀಸಲಾರಂಭಿಸಿದೆ. ಹೀಗಾಗಿ ಮುಖ್ಯಮಂತ್ರಿ ರೇಸ್ನಲ್ಲಿ ಯಾರು ಮುಂದಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರನ್ನು ಪತ್ರಕರ್ತರು ಪ್ರಶ್ನಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮುಂದಿದ್ದಾರೆ ಎಂದು ಸಚಿವ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಸದ್ಯ ನಾನು ಮುಖ್ಯಮಂತ್ರಿ ರೇಸ್ನಲ್ಲಿ ಇಲ್ಲ. ಈಗಾಗಲೇ ಹಲವರು ಮುಖ್ಯಮಂತ್ರಿಯಾಗುವ ಆಸೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಗದ್ದಲ, ಕಿತ್ತಾಟ ಬೇಡ. ರಾಜ್ಯದಲ್ಲಿ ಅಂತಹ ಪರಿಸ್ಥಿತಿ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದೇನೆ ಎಂದು ಆಪ್ತ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
0 ಕಾಮೆಂಟ್ಗಳು